ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.
ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.
ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.
ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.
ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.
ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…