ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.
ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.
ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.
ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.
ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.
ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.