ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.

ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.

ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.

ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.

ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.

ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…