ಉಪಯುಕ್ತ ಮಾಹಿತಿ

ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

59

‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.

ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ 10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

  • ಸೌಂದರ್ಯ

    ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…