ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.
‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.
ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.
ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…