ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…