News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

972

ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ…

ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ ದಕ್ಷಿಣ ಭಾರತದಲ್ಲೇ ಇದೆ ಈ ಅಪಾಯಕಾರಿ ಡ್ಯಾಮ್. ಅದು ಯಾವಾಗ ಬೇಕಿದ್ದರೂ ಒಡೆದು ಹೋಗಬಹುದು.

ಈ ಡ್ಯಾಮ್ ಇರುವುದೆಲ್ಲಿ.?

ಹೀಗೆ ಮನುಕುಲದ ವಿನಾಶಕ್ಕೆ ಕಾದುಕುಳಿತ ಆಧುನಿಕ ಯಮಧರ್ಮರಾಯ ನಂತಿರುವ ಈ ಡ್ಯಾಮ್ ನಮ್ಮ ಪಕ್ಕದಲ್ಲೇ ಇರುವ ಕೇರಳ ರಾಜ್ಯದಲ್ಲಿದೆ. ಇದು  ಒಡೆದು ಹೋದರೆ ಸಂಪೂರ್ಣವಾಗಿ ಜಲಸಮಾಧಿ ಆಗುವುದು ಗ್ಯಾರಂಟಿ. ಜಲ ರಾಕ್ಷಸನಂಟಿರುವ ಈ ಡ್ಯಾಮ್ ಹೆಸರೇ ಮುಲ್ಲಪೆರಿಯಾರ್.

ಒಂದು ವೇಳೆ ಹಾಗೆ ಏನು ಹಾಗೇನಾದ್ರೂ ಆದ್ರೆ ಸುಮಾರು ನಾಲ್ಕು ಜಿಲ್ಲೆಗಳಲ್ಲಿ ಜಲಪ್ರಳಯವೇ ನಡೆದು ಹೋಗುತ್ತೆ. ಇದು ಗೊತ್ತಿದ್ದರೂ ಸರ್ಕಾರಗಳು ಕೈಕಟ್ಟಿ ಕುಳಿತಿವೆ. ಜನರು ಮಾತ್ರ ಈ ಅಪಾಯದ ನಡುವೆ ಜೀವನ ಸಾಗಿಸುತ್ತಿದ್ದಾರೆ.

ಲಕ್ಷಾಂತರ ಜನಗಳ ಜೀವನವನ್ನು, ಬಲಿ ತೆಗೆದುಕೊಳ್ಳುವುದಕ್ಕೆ ಕೂತಿರುವ ಡ್ಯಾಮ್ ನ ಅಸಲಿ ಕಥೆ..!

ಈ ಅಣೆಕಟ್ಟು ನೂರಾರು ವರ್ಷಗಳಿಂದ ನಿರ್ಮಾಣವಾಗಿದೆ. ಇದು ಕೇರಳ ರಾಜ್ಯದಲ್ಲಿದ್ದರೂ ಈ ನೀರನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಮಾತರ ತಮಿಳುನಾಡಿನ ಜನ. ಈ ವಿಷಯದಲ್ಲಿ ನಿಮಗೆ ಒಂದು ಕನ್ಫ್ಯೂಸ್ ಆಗುತ್ತಿರುವುದು ಗ್ಯಾರೆಂಟಿ. ಏಕೆಂದರೆ ಮುಲ್ಲಪೆರಿಯಾರ್ ಡ್ಯಾಮ್ ಇರುವುದು ಕೇರಳದಲ್ಲಿ ಇದರ ನೀರನ್ನು ಬಳಸುತ್ತಿರುವುದು ತಮಿಳುನಾಡಿನ ಜನ. ಇದು ಹೇಗೆಂದು ನಿಮಗೆ ಕನ್ಫ್ಯೂಸ್ ಆಗದೆ ಇರಲ್ಲ. ಇದಕ್ಕೆ  ಮೂಲ ಕಾರಣ ಈ ಪೆರಿಯಾರ್ ನದಿ ಕೇರಳದ ಪಶ್ಚಿಮ ಘಟ್ಟಗಳ ಕಾಡಿನಲ್ಲಿ ಹುಟ್ಟುತ್ತದೆ. ಈ ನದಿಗೆ ಅಡ್ಡವಾಗಿ ಇಡುಕ್ಕಿ ಜಿಲ್ಲೆಯ ತೇಕಡಿ ಬಳಿ ಒಂದು ಡ್ಯಾಮನ್ನು ಕಟ್ಟಿದ್ದಾರೆ.

ತಮಿಳುನಾಡಿನಲ್ಲಿರುವುದು ಕೇವಲ 114 ಚದುರ ಕಿಲೋಮೀಟರ್!

ಹೀಗಾಗಿ ಇದಕ್ಕೆ ಮುಲ್ಲಪೆರಿಯಾರ್ ಅಣೆಕಟ್ಟು ಎಂದು ಹೆಸರಿಡಲಾಗಿದೆ. ಕೇರಳ ರಾಜ್ಯದಲ್ಲಿ ಅತಿ ಉದ್ದವಾದ ನದಿಯಾಗಿರುವ ಪೆರಿಯಾರ್, ತನ್ನ ಉಗಮ ಸ್ಥಾನದಿಂದ ಸಮುದ್ರ ಸೇರುವವರೆಗೂ ಸುಮಾರು 244 ಕಿಲೋಮೀಟರ್ ಗಳ ವರೆಗೂ ಹರಿಯುತ್ತದೆ. ಒಟ್ಟು  5398 ಚದುರ ಕಿಲೋಮೀಟರ್ ಜಲಾನಯನ ಪ್ರದೇಶವನ್ನು ಹೊಂದಿದೆ. ಈ ಪೈಕಿ 5284 ಚದುರ ಕಿಲೋಮೀಟರ್ ಕೇರಳದಲ್ಲಿದ್ದರೆ, ಉಳಿದ 114 ಚದುರ ಕಿಲೋಮೀಟರ್ ಗಳಷ್ಟು ಜಲಾನಯನ ಪ್ರದೇಶ ತಮಿಳುನಾಡಿನಲ್ಲಿದೆ. ಇದು ಬರೀ 114 ಚದುರ ಕಿಲೋಮೀಟರ್ ಅಂತ ನಿಮಗೆ ಅನ್ನಿಸಬಹುದು. ಆದ್ರೆ ನಾವು ಹೇಳಿದ್ದು  ಇದು ಜಲಾನಯನ ಪ್ರದೇಶ.

ಆದರೆ ಈ ಡ್ಯಾಮ್ ನ ಸಂಪೂರ್ಣ ಲಾಭವನ್ನು ತಮಿಳುನಾಡಿನ ಜನ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಬ್ರಿಟಿಷರು. ಈಗಿನ ಕೇರಳ ರಾಜ್ಯ ಬ್ರಿಟಿಷರ ಕಾಲದಲ್ಲಿ ತಿರುವನಂತಪುರ ರಾಜನ ಆಳ್ವಿಕೆಯಲ್ಲಿತ್ತು. ಆಗ ಇಡೀ ತಮಿಳುನಾಡನ್ನು ಮದ್ರಾಸ್ ರಾಜ್ಯ ಎಂಬ ಹೆಸರಲ್ಲಿ ಬ್ರಿಟಿಷರು ಆಳುತ್ತಾ ಇದ್ದರು. ಇದೇ ಮದ್ರಾಸ್ ಪ್ರಾಂತ್ಯಕ್ಕೆ ನಮ್ಮ ಕರ್ನಾಟಕದ ಕೆಲವು ಭಾಗಗಳು ಕೂಡ ಸೇರಿದ್ದವು. ಹೀಗಾಗಿ ತಮಿಳುನಾಡಿನ ಜನಕ್ಕೆ ನೀರು ಕೊಡಲೆಂದು ಬ್ರಿಟಿಷರು ಈ ಮುಲ್ಲಪೆರಿಯಾರ್ ಅಣೆಕಟ್ಟನ್ನು ಆಗ ಕಟ್ಟಿದ್ದರು.

ಇವತ್ತು ಅದು ಕೇರಳಿಗರ ಪಾಲಿಗೆ ಮರಣ ಮೃದಂಗ ವಾಗಿದೆ. ಇಲ್ಲಿ ಇನ್ನೊಂದು ವಿಷಯ ಹೇಳಬೇಕು ಅಂತ ಅಂದರೆ, ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ವಿವಾದದ ಮೂಲ ಕಾರಣ ಬ್ರಿಟಿಷರು. ಅಂದಿನ ಮೈಸೂರು ಸಂಸ್ಥಾನ ಮತ್ತು ಮದ್ರಾಸ್ ಪ್ರಾಂತ್ಯದ ನಡುವೆ ಸಾವಿರ 1924ರಲ್ಲಿ ಆದ ಒಪ್ಪಂದವೇ ಮೂಲ ಕಾರಣ.

ಮುಲ್ಲಪೆರಿಯಾರ್ ಡ್ಯಾಮ ನಿರ್ಮಾಣ

ಮುಲ್ಲಪೆರಿಯಾರ್ ಡ್ಯಾಮ ನಿರ್ಮಾಣ ವಾಗಿದ್ದು 1895. ಸಮುದ್ರ ಮಟ್ಟಕ್ಕಿಂತಲೂ ಸುಮಾರು 2890 ಅಡಿ ಎತ್ತರವಿದ್ದು, ಅರಬ್ಬಿ ಸಮುದ್ರದಿಂದ ಸುಮಾರು 130 ಕಿಲೋಮೀಟರ್ ಅಂತರದಲ್ಲಿದೆ. ಈ ಡ್ಯಾಮ್ ನಲ್ಲಿ ಸುಮಾರು 13ಟಿಎಂಸಿ ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ. ಸದ್ಯಕ್ಕೆ ಡ್ಯಾಮ್ನ ಹಿತದೃಷ್ಟಿಯಿಂದ ಸೆಂಟ್ರಲ್ ವಾಟರ್ ಕಮಿಷನ್ ಆದೇಶದಂತೆ ನೀರಿನ ಸಂಗ್ರಹಣೆಯ ಮಟ್ಟವನ್ನು 142 ಅಡಿಗಳಿಗೆ ನಿಯಂತ್ರಿಸಲಾಗಿದೆ.

ಕೇವಲ 50 ವರ್ಷ ಆಯಸ್ಸು!

ಈ ಡ್ಯಾಮ್ ಕಟ್ಟಿದಾಗ ಇದರ ಆಯಸ್ಸು ಐವತ್ತು ವರ್ಷಕ್ಕೆ ಎಂದು ಹೇಳಲಾಗಿತ್ತು. ಸುಣ್ಣ ಮತ್ತು ಗಾರೆಯನ್ನು ಬಳಸಿ ಕಟ್ಟಿರುವ ಈ ಡ್ಯಾಮ್ ನ ಭವಿಷ್ಯ ಹೆಚ್ಚು ಕಾಲ ಇರುವುದಿಲ್ಲ ಎಂದು, ಸ್ವತಹ ನಿರ್ಮಾಣ ಮಾಡಿದ ಬ್ರಿಟಿಷರಿಗೆ ನಂಬಿಕೆ ಇರಲಿಲ್ಲ. ಈ ಡ್ಯಾಮ್ ಪಕ್ಕದಲ್ಲೇ ಇನ್ನೊಂದು ಚಿಕ್ಕ ಡ್ಯಾಮ್ ಇದೆ. ಈ ಮುಲ್ಲಪೆರಿಯಾರ್ ಡ್ಯಾಮ್ ನಲ್ಲಿ ಸಂಗ್ರಹಿಸಿದ ನೀರನ್ನು ಈ ಚಿಕ್ಕ ಡ್ಯಾಮ್ ಮೂಲಕ ತಮಿಳುನಾಡಿಗೆ ಬಿಡಲಾಗುತ್ತದೆ.

ಕೇವಲ ಐವತ್ತು ವರ್ಷಗಳ ಕಾಲ ಅವದಿಗೆ ಅಂತ ಕಟ್ಟಿರುವ ಈ ಡ್ಯಾಮ್, ಈಗಾಗಲೇ ನೂರಿಪ್ಪತ್ತು ನಾಲ್ಕು ವರ್ಷಗಳನ್ನು ಕಳೆದಿದೆ. ಡ್ಯಾಮ್ ನಿರ್ಮಾಣಕ್ಕೆ ಬಳಸಿರುವ ಸುರುಕಿ ಕಳಚಿ ಬೀಳುತ್ತಿದ್ದು ಯಾವಾಗ ಬೇಕಾದರೂ ಮುಲ್ಲಪೆರಿಯಾರ್ ಒಡೆದು ಹೋಗಬಹುದೆಂಬ ಆತಂಕ ಎದುರಾಗಿದೆ. ನೀವು ಒಮ್ಮೆ ಯೋಚನೆ ಮಾಡಿ, ಒಂದು ವೇಳೆ 13 ಟಿಎಂಸಿ ನೀರು ಇರುವ ಈ ಆಣೆಕಟ್ಟು ಒಡೆದು ಹೋದರೆ, ಅದರ ಪಕ್ಕದಲ್ಲಿರುವ ಜನರ ಜೀವನದ ಕಥೆ ಏನಾಗುತ್ತೆ? ಯಾವ ಮಟ್ಟದಲ್ಲಿ ವಿನಾಶ ಸಂಭವಿಸಬಹುದು. ಅದು ಜಲಪ್ರಳಯಕ್ಕೆ ಸಮವಾದ ಅಂತೆ.

ಹೀಗಾಗಿ ಕೇರಳಿಗರು ಆತಂಕಕ್ಕೀಡಾಗಿದ್ದಾರೆ. ಒಂದು ವೇಳೆ ಈ ಡ್ಯಾಮ್  ಒಡೆದು ಹೋದರೆ ಕೇರಳದ ಕೊಚ್ಚಿನ್ ಸೇರಿದಂತೆ ಹಲವು ನಗರಗಳು ಕೊಚ್ಚಿ ಹೋಗುತ್ತವೆ. ಇದು ಕೇರಳದ ಹಲವಾರು ಜನಪರ ಸಂಘಟನೆಗಳ ಆತಂಕ ಮತ್ತು ಆಂದೋಲನಕ್ಕೆ ಪ್ರಮುಖ ಕಾರಣವಾಗಿದೆ. ಇದಕ್ಕಿಂತ ಹೆಚ್ಚಾಗಿ ಡ್ಯಾಮಿನಿಂದ ಕೆಲವೇ ಅಂತರದಲ್ಲಿ ಕೆಲವೇ ಕಿಲೋಮೀಟರ್ ಗಳ ಅಂತರದಲ್ಲಿ ಎರಡು ಭೂಕಂಪನ ಕೇಂದ್ರಗಳು ಪತ್ತೆಯಾಗಿರುವುದು ಜನರ ಆತಂಕಕ್ಕೆ ಮತ್ತಷ್ಟೂ ಕಾರಣವಾಗಿದೆ.

ನೀವು ಹೇಳಬಹುದು ಡ್ಯಾಮ್ ಹಳೆಯದಾಗಿದೆ, ತಾನೇ ಹೊಸದಾಗಿ ಕಟ್ಟಬಹುದು ಅಂತ. ಆದರೆ ಇಲ್ಲೇ ಇರುವುದು ಪ್ರಾಬ್ಲಮ್. ಯಾಕಂದ್ರೆ ಈ ಡ್ಯಾಮ್ ಕೇರಳ ರಾಜ್ಯದಲ್ಲಿ ಇದ್ದರೂ, ಇದರ ಸಂಪೂರ್ಣ ಲಾಭ ಪಡೆಯುತ್ತಿರುವುದು ಮಾತ್ರ ತಮಿಳುನಾಡು ಮತ್ತು ಸಂಪೂರ್ಣ ಅಧಿಕಾರ ಇರುವುದು ತಮಿಳುನಾಡಿನ ರಾಜ್ಯಕ್ಕೆ ಮಾತ್ರ. ಇದಕ್ಕೆ ಮೂಲ ಕಾರಣ ಬ್ರಿಟಿಷರು ನಮ್ಮ ದೇಶ ಬಿಟ್ಟು ಹೋದ ನಂತರ ತಮಿಳುನಾಡು ಮತ್ತು ಕೇರಳದ ನಡುವೆ ಆದ ಒಪ್ಪಂದ.

ತಮ್ಮ ರಾಜ್ಯದಲ್ಲಿರುವ ಅಣೆಕಟ್ಟಿನ ನೀರನ್ನು ತಮಿಳುನಾಡು ಬಳಸುತ್ತಿರುವುದರ ಬಗ್ಗೆ ಕೇರಳಿಗರಿಗೆ ಆಕ್ರೋಶವಿಲ್ಲ. ಆದರೆ ಡ್ಯಾಮ್ ನ ನವೀಕರಣಕ್ಕೆ ತಮಿಳುನಾಡು ಸರ್ಕಾರ ಒಪ್ಪದೇ ಇರುವುದೇ ಕೇರಳಿಗರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ. ಇಲ್ಲಿ ಒಂದು ಪ್ರಶ್ನೆ ಮೂಡಬಹುದು? ಹೊಸ ಆಣೆಕಟ್ಟು  ಕತ್ತೋದಕ್ಕೆ ತಮಿಳುನಾಡಿನ ಸರ್ಕಾರ ಏಕೆ ಅಡ್ಡಿ  ಮಾಡುತ್ತಿದೆ ಎಂದು. ಇಲ್ಲಿ ಒಂದು ಪ್ರಾಬ್ಲಮ್ ತಮಿಳುನಾಡಿನ ಸರ್ಕಾರಕ್ಕಿದೆ. ಅದು ಏನ್ ಎಂದರೆ ಒಂದು ವೇಳೆ ಮುಲ್ಲಾ ಪೇರಿಯಾರ ಡ್ಯಾಮನ್ನು ನವೀಕರಣ ಮಾಡೋದಕ್ಕೆ ಅವಕಾಶ ಕೊಟ್ಟರೆ, ತಮಿಳುನಾಡಿನ ಸರ್ಕಾರದ ಕೈಯಿಂದ ಆಣೆಕಟ್ಟು ಎಲ್ಲಿ ತಪ್ಪಿ ಹೋಗುತ್ತೋ ಎಂಬ ಭಯ ತಮಿಳುನಾಡಿ.ಹೀಗಾಗಿಯೇ ತಮಿಳುನಾಡಿನ ಸರ್ಕಾರ ಯಾರಿಗೆ ಏನಾದ್ರೂ, ನಮಗೆ ಏನು? ನಾವು ಚೆನ್ನಾಗಿದ್ದರೆ ಸಾಕು. ನೀರ್ ಬಂದ್ರ ಸಾಕು ಎಂಬ ಮನಸ್ಥಿತಿಯಲ್ಲಿ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…