News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಉಪಯುಕ್ತ ಮಾಹಿತಿ

ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

971

ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ…

ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ ದಕ್ಷಿಣ ಭಾರತದಲ್ಲೇ ಇದೆ ಈ ಅಪಾಯಕಾರಿ ಡ್ಯಾಮ್. ಅದು ಯಾವಾಗ ಬೇಕಿದ್ದರೂ ಒಡೆದು ಹೋಗಬಹುದು.

ಈ ಡ್ಯಾಮ್ ಇರುವುದೆಲ್ಲಿ.?

ಹೀಗೆ ಮನುಕುಲದ ವಿನಾಶಕ್ಕೆ ಕಾದುಕುಳಿತ ಆಧುನಿಕ ಯಮಧರ್ಮರಾಯ ನಂತಿರುವ ಈ ಡ್ಯಾಮ್ ನಮ್ಮ ಪಕ್ಕದಲ್ಲೇ ಇರುವ ಕೇರಳ ರಾಜ್ಯದಲ್ಲಿದೆ. ಇದು  ಒಡೆದು ಹೋದರೆ ಸಂಪೂರ್ಣವಾಗಿ ಜಲಸಮಾಧಿ ಆಗುವುದು ಗ್ಯಾರಂಟಿ. ಜಲ ರಾಕ್ಷಸನಂಟಿರುವ ಈ ಡ್ಯಾಮ್ ಹೆಸರೇ ಮುಲ್ಲಪೆರಿಯಾರ್.

ಒಂದು ವೇಳೆ ಹಾಗೆ ಏನು ಹಾಗೇನಾದ್ರೂ ಆದ್ರೆ ಸುಮಾರು ನಾಲ್ಕು ಜಿಲ್ಲೆಗಳಲ್ಲಿ ಜಲಪ್ರಳಯವೇ ನಡೆದು ಹೋಗುತ್ತೆ. ಇದು ಗೊತ್ತಿದ್ದರೂ ಸರ್ಕಾರಗಳು ಕೈಕಟ್ಟಿ ಕುಳಿತಿವೆ. ಜನರು ಮಾತ್ರ ಈ ಅಪಾಯದ ನಡುವೆ ಜೀವನ ಸಾಗಿಸುತ್ತಿದ್ದಾರೆ.

ಲಕ್ಷಾಂತರ ಜನಗಳ ಜೀವನವನ್ನು, ಬಲಿ ತೆಗೆದುಕೊಳ್ಳುವುದಕ್ಕೆ ಕೂತಿರುವ ಡ್ಯಾಮ್ ನ ಅಸಲಿ ಕಥೆ..!

ಈ ಅಣೆಕಟ್ಟು ನೂರಾರು ವರ್ಷಗಳಿಂದ ನಿರ್ಮಾಣವಾಗಿದೆ. ಇದು ಕೇರಳ ರಾಜ್ಯದಲ್ಲಿದ್ದರೂ ಈ ನೀರನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಮಾತರ ತಮಿಳುನಾಡಿನ ಜನ. ಈ ವಿಷಯದಲ್ಲಿ ನಿಮಗೆ ಒಂದು ಕನ್ಫ್ಯೂಸ್ ಆಗುತ್ತಿರುವುದು ಗ್ಯಾರೆಂಟಿ. ಏಕೆಂದರೆ ಮುಲ್ಲಪೆರಿಯಾರ್ ಡ್ಯಾಮ್ ಇರುವುದು ಕೇರಳದಲ್ಲಿ ಇದರ ನೀರನ್ನು ಬಳಸುತ್ತಿರುವುದು ತಮಿಳುನಾಡಿನ ಜನ. ಇದು ಹೇಗೆಂದು ನಿಮಗೆ ಕನ್ಫ್ಯೂಸ್ ಆಗದೆ ಇರಲ್ಲ. ಇದಕ್ಕೆ  ಮೂಲ ಕಾರಣ ಈ ಪೆರಿಯಾರ್ ನದಿ ಕೇರಳದ ಪಶ್ಚಿಮ ಘಟ್ಟಗಳ ಕಾಡಿನಲ್ಲಿ ಹುಟ್ಟುತ್ತದೆ. ಈ ನದಿಗೆ ಅಡ್ಡವಾಗಿ ಇಡುಕ್ಕಿ ಜಿಲ್ಲೆಯ ತೇಕಡಿ ಬಳಿ ಒಂದು ಡ್ಯಾಮನ್ನು ಕಟ್ಟಿದ್ದಾರೆ.

ತಮಿಳುನಾಡಿನಲ್ಲಿರುವುದು ಕೇವಲ 114 ಚದುರ ಕಿಲೋಮೀಟರ್!

ಹೀಗಾಗಿ ಇದಕ್ಕೆ ಮುಲ್ಲಪೆರಿಯಾರ್ ಅಣೆಕಟ್ಟು ಎಂದು ಹೆಸರಿಡಲಾಗಿದೆ. ಕೇರಳ ರಾಜ್ಯದಲ್ಲಿ ಅತಿ ಉದ್ದವಾದ ನದಿಯಾಗಿರುವ ಪೆರಿಯಾರ್, ತನ್ನ ಉಗಮ ಸ್ಥಾನದಿಂದ ಸಮುದ್ರ ಸೇರುವವರೆಗೂ ಸುಮಾರು 244 ಕಿಲೋಮೀಟರ್ ಗಳ ವರೆಗೂ ಹರಿಯುತ್ತದೆ. ಒಟ್ಟು  5398 ಚದುರ ಕಿಲೋಮೀಟರ್ ಜಲಾನಯನ ಪ್ರದೇಶವನ್ನು ಹೊಂದಿದೆ. ಈ ಪೈಕಿ 5284 ಚದುರ ಕಿಲೋಮೀಟರ್ ಕೇರಳದಲ್ಲಿದ್ದರೆ, ಉಳಿದ 114 ಚದುರ ಕಿಲೋಮೀಟರ್ ಗಳಷ್ಟು ಜಲಾನಯನ ಪ್ರದೇಶ ತಮಿಳುನಾಡಿನಲ್ಲಿದೆ. ಇದು ಬರೀ 114 ಚದುರ ಕಿಲೋಮೀಟರ್ ಅಂತ ನಿಮಗೆ ಅನ್ನಿಸಬಹುದು. ಆದ್ರೆ ನಾವು ಹೇಳಿದ್ದು  ಇದು ಜಲಾನಯನ ಪ್ರದೇಶ.

ಆದರೆ ಈ ಡ್ಯಾಮ್ ನ ಸಂಪೂರ್ಣ ಲಾಭವನ್ನು ತಮಿಳುನಾಡಿನ ಜನ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಬ್ರಿಟಿಷರು. ಈಗಿನ ಕೇರಳ ರಾಜ್ಯ ಬ್ರಿಟಿಷರ ಕಾಲದಲ್ಲಿ ತಿರುವನಂತಪುರ ರಾಜನ ಆಳ್ವಿಕೆಯಲ್ಲಿತ್ತು. ಆಗ ಇಡೀ ತಮಿಳುನಾಡನ್ನು ಮದ್ರಾಸ್ ರಾಜ್ಯ ಎಂಬ ಹೆಸರಲ್ಲಿ ಬ್ರಿಟಿಷರು ಆಳುತ್ತಾ ಇದ್ದರು. ಇದೇ ಮದ್ರಾಸ್ ಪ್ರಾಂತ್ಯಕ್ಕೆ ನಮ್ಮ ಕರ್ನಾಟಕದ ಕೆಲವು ಭಾಗಗಳು ಕೂಡ ಸೇರಿದ್ದವು. ಹೀಗಾಗಿ ತಮಿಳುನಾಡಿನ ಜನಕ್ಕೆ ನೀರು ಕೊಡಲೆಂದು ಬ್ರಿಟಿಷರು ಈ ಮುಲ್ಲಪೆರಿಯಾರ್ ಅಣೆಕಟ್ಟನ್ನು ಆಗ ಕಟ್ಟಿದ್ದರು.

ಇವತ್ತು ಅದು ಕೇರಳಿಗರ ಪಾಲಿಗೆ ಮರಣ ಮೃದಂಗ ವಾಗಿದೆ. ಇಲ್ಲಿ ಇನ್ನೊಂದು ವಿಷಯ ಹೇಳಬೇಕು ಅಂತ ಅಂದರೆ, ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ವಿವಾದದ ಮೂಲ ಕಾರಣ ಬ್ರಿಟಿಷರು. ಅಂದಿನ ಮೈಸೂರು ಸಂಸ್ಥಾನ ಮತ್ತು ಮದ್ರಾಸ್ ಪ್ರಾಂತ್ಯದ ನಡುವೆ ಸಾವಿರ 1924ರಲ್ಲಿ ಆದ ಒಪ್ಪಂದವೇ ಮೂಲ ಕಾರಣ.

ಮುಲ್ಲಪೆರಿಯಾರ್ ಡ್ಯಾಮ ನಿರ್ಮಾಣ

ಮುಲ್ಲಪೆರಿಯಾರ್ ಡ್ಯಾಮ ನಿರ್ಮಾಣ ವಾಗಿದ್ದು 1895. ಸಮುದ್ರ ಮಟ್ಟಕ್ಕಿಂತಲೂ ಸುಮಾರು 2890 ಅಡಿ ಎತ್ತರವಿದ್ದು, ಅರಬ್ಬಿ ಸಮುದ್ರದಿಂದ ಸುಮಾರು 130 ಕಿಲೋಮೀಟರ್ ಅಂತರದಲ್ಲಿದೆ. ಈ ಡ್ಯಾಮ್ ನಲ್ಲಿ ಸುಮಾರು 13ಟಿಎಂಸಿ ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ. ಸದ್ಯಕ್ಕೆ ಡ್ಯಾಮ್ನ ಹಿತದೃಷ್ಟಿಯಿಂದ ಸೆಂಟ್ರಲ್ ವಾಟರ್ ಕಮಿಷನ್ ಆದೇಶದಂತೆ ನೀರಿನ ಸಂಗ್ರಹಣೆಯ ಮಟ್ಟವನ್ನು 142 ಅಡಿಗಳಿಗೆ ನಿಯಂತ್ರಿಸಲಾಗಿದೆ.

ಕೇವಲ 50 ವರ್ಷ ಆಯಸ್ಸು!

ಈ ಡ್ಯಾಮ್ ಕಟ್ಟಿದಾಗ ಇದರ ಆಯಸ್ಸು ಐವತ್ತು ವರ್ಷಕ್ಕೆ ಎಂದು ಹೇಳಲಾಗಿತ್ತು. ಸುಣ್ಣ ಮತ್ತು ಗಾರೆಯನ್ನು ಬಳಸಿ ಕಟ್ಟಿರುವ ಈ ಡ್ಯಾಮ್ ನ ಭವಿಷ್ಯ ಹೆಚ್ಚು ಕಾಲ ಇರುವುದಿಲ್ಲ ಎಂದು, ಸ್ವತಹ ನಿರ್ಮಾಣ ಮಾಡಿದ ಬ್ರಿಟಿಷರಿಗೆ ನಂಬಿಕೆ ಇರಲಿಲ್ಲ. ಈ ಡ್ಯಾಮ್ ಪಕ್ಕದಲ್ಲೇ ಇನ್ನೊಂದು ಚಿಕ್ಕ ಡ್ಯಾಮ್ ಇದೆ. ಈ ಮುಲ್ಲಪೆರಿಯಾರ್ ಡ್ಯಾಮ್ ನಲ್ಲಿ ಸಂಗ್ರಹಿಸಿದ ನೀರನ್ನು ಈ ಚಿಕ್ಕ ಡ್ಯಾಮ್ ಮೂಲಕ ತಮಿಳುನಾಡಿಗೆ ಬಿಡಲಾಗುತ್ತದೆ.

ಕೇವಲ ಐವತ್ತು ವರ್ಷಗಳ ಕಾಲ ಅವದಿಗೆ ಅಂತ ಕಟ್ಟಿರುವ ಈ ಡ್ಯಾಮ್, ಈಗಾಗಲೇ ನೂರಿಪ್ಪತ್ತು ನಾಲ್ಕು ವರ್ಷಗಳನ್ನು ಕಳೆದಿದೆ. ಡ್ಯಾಮ್ ನಿರ್ಮಾಣಕ್ಕೆ ಬಳಸಿರುವ ಸುರುಕಿ ಕಳಚಿ ಬೀಳುತ್ತಿದ್ದು ಯಾವಾಗ ಬೇಕಾದರೂ ಮುಲ್ಲಪೆರಿಯಾರ್ ಒಡೆದು ಹೋಗಬಹುದೆಂಬ ಆತಂಕ ಎದುರಾಗಿದೆ. ನೀವು ಒಮ್ಮೆ ಯೋಚನೆ ಮಾಡಿ, ಒಂದು ವೇಳೆ 13 ಟಿಎಂಸಿ ನೀರು ಇರುವ ಈ ಆಣೆಕಟ್ಟು ಒಡೆದು ಹೋದರೆ, ಅದರ ಪಕ್ಕದಲ್ಲಿರುವ ಜನರ ಜೀವನದ ಕಥೆ ಏನಾಗುತ್ತೆ? ಯಾವ ಮಟ್ಟದಲ್ಲಿ ವಿನಾಶ ಸಂಭವಿಸಬಹುದು. ಅದು ಜಲಪ್ರಳಯಕ್ಕೆ ಸಮವಾದ ಅಂತೆ.

ಹೀಗಾಗಿ ಕೇರಳಿಗರು ಆತಂಕಕ್ಕೀಡಾಗಿದ್ದಾರೆ. ಒಂದು ವೇಳೆ ಈ ಡ್ಯಾಮ್  ಒಡೆದು ಹೋದರೆ ಕೇರಳದ ಕೊಚ್ಚಿನ್ ಸೇರಿದಂತೆ ಹಲವು ನಗರಗಳು ಕೊಚ್ಚಿ ಹೋಗುತ್ತವೆ. ಇದು ಕೇರಳದ ಹಲವಾರು ಜನಪರ ಸಂಘಟನೆಗಳ ಆತಂಕ ಮತ್ತು ಆಂದೋಲನಕ್ಕೆ ಪ್ರಮುಖ ಕಾರಣವಾಗಿದೆ. ಇದಕ್ಕಿಂತ ಹೆಚ್ಚಾಗಿ ಡ್ಯಾಮಿನಿಂದ ಕೆಲವೇ ಅಂತರದಲ್ಲಿ ಕೆಲವೇ ಕಿಲೋಮೀಟರ್ ಗಳ ಅಂತರದಲ್ಲಿ ಎರಡು ಭೂಕಂಪನ ಕೇಂದ್ರಗಳು ಪತ್ತೆಯಾಗಿರುವುದು ಜನರ ಆತಂಕಕ್ಕೆ ಮತ್ತಷ್ಟೂ ಕಾರಣವಾಗಿದೆ.

ನೀವು ಹೇಳಬಹುದು ಡ್ಯಾಮ್ ಹಳೆಯದಾಗಿದೆ, ತಾನೇ ಹೊಸದಾಗಿ ಕಟ್ಟಬಹುದು ಅಂತ. ಆದರೆ ಇಲ್ಲೇ ಇರುವುದು ಪ್ರಾಬ್ಲಮ್. ಯಾಕಂದ್ರೆ ಈ ಡ್ಯಾಮ್ ಕೇರಳ ರಾಜ್ಯದಲ್ಲಿ ಇದ್ದರೂ, ಇದರ ಸಂಪೂರ್ಣ ಲಾಭ ಪಡೆಯುತ್ತಿರುವುದು ಮಾತ್ರ ತಮಿಳುನಾಡು ಮತ್ತು ಸಂಪೂರ್ಣ ಅಧಿಕಾರ ಇರುವುದು ತಮಿಳುನಾಡಿನ ರಾಜ್ಯಕ್ಕೆ ಮಾತ್ರ. ಇದಕ್ಕೆ ಮೂಲ ಕಾರಣ ಬ್ರಿಟಿಷರು ನಮ್ಮ ದೇಶ ಬಿಟ್ಟು ಹೋದ ನಂತರ ತಮಿಳುನಾಡು ಮತ್ತು ಕೇರಳದ ನಡುವೆ ಆದ ಒಪ್ಪಂದ.

ತಮ್ಮ ರಾಜ್ಯದಲ್ಲಿರುವ ಅಣೆಕಟ್ಟಿನ ನೀರನ್ನು ತಮಿಳುನಾಡು ಬಳಸುತ್ತಿರುವುದರ ಬಗ್ಗೆ ಕೇರಳಿಗರಿಗೆ ಆಕ್ರೋಶವಿಲ್ಲ. ಆದರೆ ಡ್ಯಾಮ್ ನ ನವೀಕರಣಕ್ಕೆ ತಮಿಳುನಾಡು ಸರ್ಕಾರ ಒಪ್ಪದೇ ಇರುವುದೇ ಕೇರಳಿಗರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ. ಇಲ್ಲಿ ಒಂದು ಪ್ರಶ್ನೆ ಮೂಡಬಹುದು? ಹೊಸ ಆಣೆಕಟ್ಟು  ಕತ್ತೋದಕ್ಕೆ ತಮಿಳುನಾಡಿನ ಸರ್ಕಾರ ಏಕೆ ಅಡ್ಡಿ  ಮಾಡುತ್ತಿದೆ ಎಂದು. ಇಲ್ಲಿ ಒಂದು ಪ್ರಾಬ್ಲಮ್ ತಮಿಳುನಾಡಿನ ಸರ್ಕಾರಕ್ಕಿದೆ. ಅದು ಏನ್ ಎಂದರೆ ಒಂದು ವೇಳೆ ಮುಲ್ಲಾ ಪೇರಿಯಾರ ಡ್ಯಾಮನ್ನು ನವೀಕರಣ ಮಾಡೋದಕ್ಕೆ ಅವಕಾಶ ಕೊಟ್ಟರೆ, ತಮಿಳುನಾಡಿನ ಸರ್ಕಾರದ ಕೈಯಿಂದ ಆಣೆಕಟ್ಟು ಎಲ್ಲಿ ತಪ್ಪಿ ಹೋಗುತ್ತೋ ಎಂಬ ಭಯ ತಮಿಳುನಾಡಿ.ಹೀಗಾಗಿಯೇ ತಮಿಳುನಾಡಿನ ಸರ್ಕಾರ ಯಾರಿಗೆ ಏನಾದ್ರೂ, ನಮಗೆ ಏನು? ನಾವು ಚೆನ್ನಾಗಿದ್ದರೆ ಸಾಕು. ನೀರ್ ಬಂದ್ರ ಸಾಕು ಎಂಬ ಮನಸ್ಥಿತಿಯಲ್ಲಿ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತುಂಬಾ ಅದೃಷ್ಟವಂತರಾಗಿರುತ್ತಾರೆ ಇಂಥ ಹುಡುಗಿಯರು!ಇವರು ಮನೆಗೆ ಬಂದ್ರೆ ಬದಲಾಗುತ್ತೆ ಅದೃಷ್ಟ…

    ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…