ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್.
ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ ಪೋಷಕಾಂಶಗಳಿವೆ.
ಕಲ್ಲಂಗಡಿಯಲ್ಲಿ ಫೈಬರ್ ಅಂಶವಿರೋದ್ರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಆದ್ರೆ ಕಲ್ಲಂಗಡಿಯನ್ನು ನೀವು ಯಾವ ಸಮಯದಲ್ಲಿ ತಿನ್ನುತ್ತೀರಾ ಅನ್ನೋದು ಕೂಡ ಅಷ್ಟೇ ಮಹತ್ವದ ವಿಚಾರ. ಸಂಜೆ 7 ಗಂಟೆಯ ನಂತರ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ. ಯಾಕಂದ್ರೆ ಇದರಿಂದ ಜೀರ್ಣಕ್ರಿಯೆ ನಿಧಾನವಾಗುತ್ತದೆ. ಮಧ್ಯಾಹ್ನ 12-1 ಗಂಟೆ ಸಮಯ ಕಲ್ಲಂಗಡಿ ಸೇವನೆಗೆ ಉತ್ತಮವಾದದ್ದು.
ಕಲ್ಲಂಗಡಿ ಜೀರ್ಣಕ್ರಿಯೆಗೆ ಹೆಚ್ಚು ಸಹಕರಿಸುವುದಿಲ್ಲ. ರಾತ್ರಿ ಸೇವಿಸಿದರೆ ಮರುದಿನ ನಿಮ್ಮ ಹೊಟ್ಟೆ ಅಪ್ಸೆಟ್ ಆಗಬಹುದು. ಕಲ್ಲಂಗಡಿಯಲ್ಲಿ ನೈಸರ್ಗಿಕ ಸಕ್ಕರೆ ಪ್ರಮಾಣ ಹೆಚ್ಚಾಗಿರುತ್ತದೆ. ಹಾಗಾಗಿ ರಾತ್ರಿ ಸೇವನೆಯಿಂದ ನಿಮ್ಮ ತೂಕ ಹೆಚ್ಚಾಗಬಹುದು. ನಿದ್ರಾಹೀನತೆ ಕಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….