ಸುದ್ದಿ

ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

49

ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಜಲಮಂಡಳಿ ವತಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ’ ಎಂದು ಸಚಿವರು ಹೇಳಿದರು.ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಸುಮಾರು ಒಂದೂವರೆ ವರ್ಷದಿಂದ ನೀರು ಶುದ್ಧೀಕರಣ ಮಾಡುವ ಟ್ಯಾಂಕ್ ಕಾರ್ಯ ನಡೆಯುತ್ತಿತ್ತು

ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನೀರು ಶುದ್ದೀಕರಣ ಮಾಡುವ ಮೂರು ಟ್ಯಾಂಕ್‌ಗಳನ್ನು ನಿರ್ಮಾಣ ಮಾಡುವ ಗುತ್ತಿಗೆಯನ್ನು ಎನ್ವರೋನ್ ಎಂಬ ಕಂಪನಿ ಪಡೆದಿತ್ತು. ನೀರಿನ ಟ್ಯಾಂಕ್ ಕುಸಿದ ಬಳಿಕ ಪೊಲೀಸರು ಗುತ್ತಿಗೆ ಪಡೆದಿದ್ದ ಕಂಪನಿಯ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದಾರೆ.ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಹಾಕಲಾಗಿದ್ದ ಪೈಪ್ ಕುಸಿದು ಬಿದ್ದ ಕಾರಣ ಸೆಂಟ್ರಿಂಗ್ ಕುಸಿದು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಘಟನೆಗೆ ಗುತ್ತಿಗೆದಾರರೇ ಹೊಣೆ ಎಂದು ಅವರಿಂದಲೇ ಆದ ನಷ್ಟವನ್ನು ಪಡೆಯುಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ನೀರಿನ ಟ್ಯಾಂಕ್ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಇಂಜಿನಿಯರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗುತ್ತಿಗೆದಾರನ ವಿರುದ್ಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ. ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದಿದ್ದರಿಂದ 3 ಜನರು ಮೃತಪಟ್ಟಿದ್ದಾರೆ. 20 ಜನರು ಕೊಲಂಬಿಯಾ ಏಷಿಯಾ ಮತ್ತು ಆಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಕೆಲವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಜಲಮಂಡಳಿ ಭರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…