ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ.

ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್ಗಳಲ್ಲಿ ವಾಟ್ಸಪ್ ಬಳಸುವವರಿಗೆ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್ ಮಾದರಿಯ ಓಎಸ್ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್ ಐಓಎಸ್ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್ ಸೇವ್ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಅಪ್ಡೇಟ್ ವರ್ಷನ್ನಲ್ಲಿ ಸೇರ್ಪಡೆ ವಾಟ್ಸಪ್ ಐಓಎಸ್ ವರ್ಷನ್ನಲ್ಲಿ ಅಪ್ಡೇಟ್ ಮಾಡಲಿದ್ದು, ವಾಟ್ಸಪ್ನ ಹೊಸ ಐಓಎಸ್ ವರ್ಷನ್(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಆಗಲ್ಲ ಆದರೆ ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ಮಾಡಬಹುದು.ಪ್ರೊಫೈಲ್ ಪೋಟೊ ಸೇವ್ ಇನ್ನಿಲ್ಲ ಈ ಹಿಂದೆ ವಾಟ್ಸಪ್ ಲಿಸ್ಟ್ ನಲ್ಲಿರುವ ಇತರರ ಪ್ರೊಫೈಲ್ ಫೋಟೊವನ್ನು ಸೇವ್ ಮಾಡಬಹುದಾಗಿತ್ತು. ಆದರೆ ಫೇಸ್ಬುಕ್ ಒಡೆತನದ ವಾಟ್ಸಪ್ ಸಂಸ್ಥೆಯು ತನ್ನ ಹೊಸ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.

ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ವಾಟ್ಸಪ್ ಲಿಸ್ಟ್ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್ ಫೋಟೊವನ್ನು ಸೇವ್ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್ ಲಿಸ್ಟ್ನಲ್ಲಿರುವ ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್ ಬಳಕೆದಾರರು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದುಅಂಡ್ರಾಯ್ಡ್ಗೆ ಅನ್ವಯ ಇಲ್ಲ ವಾಟ್ಸಪ್ ಪ್ರೊಫೈಲ್ ಪೋಟೊ ಸೇವ್ ಮಾಡುವ ಆಯ್ಕೆಯನ್ನು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್ ಓಎಸ್ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಗ್ಯಾಲರಿಗೆ ಸೇವ್ ಮಾಡಬಹುದು.
ಕಾರಣ ಏನು? ಐಓಎಸ್ ಬಳಕೆದಾರರಿಗೆ ಮಾತ್ರ ವಾಟ್ಸಪ್ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್ನಲ್ಲಿ ಗ್ರೂಪ್ಗಳ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.