ಸುದ್ದಿ

ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

96

ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್, ವಾರ್ಡನ್ ಬರ್ಗ್ ಸಿಂಡ್ರೋಮ್, ನ್ಯೂರೋಫೈಬ್ರೊಮಾ ಟೋಸಿಸ್, ಗ್ರೇವ್ಸ್ ಅಥವಾ ಹಶಿಮೊಟೊ ಕಾಯಿಲೆಗಳಿದ್ದಾಗ., *ಪೌಷ್ಠಿಕಾಂಶದ ಕೊರತೆ, *ಹೆಚ್ಚು ಒತ್ತಡ, *ಸಿಂಥೆಟಿಕ್ ಶಾಂಪೂ ಮತ್ತು ಸಾಬೂನುಗಳ ಬಳಕೆ, *ಧೂಮಪಾನ *ಇನ್ನು ಅನೇಕ ಕಾರಣಗಳಿಗೆ ನರೆ ಕೂದಲು ಬರಬಹುದು. ಆದರೆ ಸಮಸ್ಯೆಯ ಮೂಲ ಕಾರಣ ಗೊತ್ತಾಗಬೇಕಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ನೆಲ್ಲಿಕಾಯಿ :*ನಿಮಗೆ ಬೇಕಾಗಿರುವುದು 3-4 ನೆಲ್ಲಿಕಾಯಿ, 1 ಕಪ್ ನೀರು, *ಮೊದಲಿಗೆ ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, *ನಂತರ ಒಂದು ಲೋಟ ನೀರಿಗೆ ಸೇರಿಸಿ, ಕುದಿಯಲು ಬಿಡಿ, *ಚೆನ್ನಾಗಿ ಕುದಿಸಿದ ನಂತರ ಒಲೆಯಿಂದ ಕೆಳಗಿಳಿಸಿ, ತಣ್ಣಗಾಗಲು ಬಿಡಿ. ಆನಂತರ ಸೋಸಿ, *ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ

ಕೊಬ್ಬರಿ ಎಣ್ಣೆ: *1-2 ಟೇಬಲ್ ಸ್ಪೂನ್ ಶುದ್ಧವಾದ ತಾಜಾ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ,  *ನಿಮ್ಮ ನೆತ್ತಿ ಮತ್ತು ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚಿ, *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್‌ನಿಂದ ತೊಳೆಯಿರಿ, *ಗುಣಮಟ್ಟದ ಕಂಡಿಷನರ್ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ

ಅಲೊವೆರಾ:  *ಅಲೊವೆರಾ ಜ್ಯೂಸ್ ಒಂದು ಕಪ್ ತೆಗೆದಿಟ್ಟುಕೊಳ್ಳಿ, *ಗೋರಂಟಿ ಅಥವಾ ಕಾಫಿ ಜೊತೆಯಲ್ಲಿ ಇದನ್ನು ಸೇರಿಸಿ, *ಇದನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಡಿ, *ತಿಂಗಳಿಗೊಮ್ಮೆ ಹೀಗೆ ಮಾಡಬಹುದು. ಅಲೊವೆರಾ ಜ್ಯೂಸ್ ಅನ್ನು ವಾರಕ್ಕೊಮ್ಮೆ ಬಳಸಬಹುದು.

ಕರಿಬೇವಿನ ಎಲೆಗಳು: *15-20 ಕರಿಬೇವಿನ ಎಲೆಗಳು, ½ ಕಪ್ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ಒಂದು ಬಟ್ಟಲಿನಲ್ಲಿ ಕೊಬ್ಬರಿ ಎಣ್ಣೆಗೆ 15-20 ಕರಿಬೇವಿನ ಎಲೆ ಸೇರಿಸಿ ಕುದಿಸಿ. *ಎಣ್ಣೆ ಕಪ್ಪು ಬಣ್ಣಕ್ಕೆ ತಿರುಗಿದಾಗ, ಒಲೆ ಆಫ್ ಮಾಡಿ. ತಣ್ಣಗಾಗಲು ಬಿಡಿ. ಇದನ್ನು ಕೂದಲು ಮತ್ತು ನೆತ್ತಿಗೆ ಹಚ್ಚಿ. ಕನಿಷ್ಠ ಒಂದು ಗಂಟೆ ಕಾಲ ಬಿಡಿ, *ಬೇಗ ಫಲಿತಾಂಶ ಬೇಕೆಂದರೆ ವಾರಕ್ಕೊಮ್ಮೆ ಮಾಡಬಹುದು

ಭೃಂಗರಾಜ ಎಣ್ಣೆ ಅಥವಾ ಪುಡಿ: *ನೆತ್ತಿಗೆ ಮತ್ತು ಕೂದಲಿಗೆ ಭೃಂಗರಾಜ ಎಣ್ಣೆ ಹಚ್ಚಿ. *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್‌ನಿಂದ ತೊಳೆಯಿರಿ. *ಎಣ್ಣೆಯಿಲ್ಲದಿದ್ದರೆ ಭೃಂಗರಾಜ ಪುಡಿಯನ್ನು ನೀರಿನೊಂದಿಗೆ ಬೆರೆಸಿ ದಪ್ಪ ಪೇಸ್ಟ್ ಮಾಡಿ. *ಇದನ್ನು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಟ್ಟು ತೊಳೆಯಿರಿ. *ವಾರಕೊಮ್ಮೆ ಅಥವಾ ತಿಂಗಳಿಗೊಮ್ಮೆ ನೀವಿದನ್ನು ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.