ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್, ವಾರ್ಡನ್ ಬರ್ಗ್ ಸಿಂಡ್ರೋಮ್, ನ್ಯೂರೋಫೈಬ್ರೊಮಾ ಟೋಸಿಸ್, ಗ್ರೇವ್ಸ್ ಅಥವಾ ಹಶಿಮೊಟೊ ಕಾಯಿಲೆಗಳಿದ್ದಾಗ., *ಪೌಷ್ಠಿಕಾಂಶದ ಕೊರತೆ, *ಹೆಚ್ಚು ಒತ್ತಡ, *ಸಿಂಥೆಟಿಕ್ ಶಾಂಪೂ ಮತ್ತು ಸಾಬೂನುಗಳ ಬಳಕೆ, *ಧೂಮಪಾನ *ಇನ್ನು ಅನೇಕ ಕಾರಣಗಳಿಗೆ ನರೆ ಕೂದಲು ಬರಬಹುದು. ಆದರೆ ಸಮಸ್ಯೆಯ ಮೂಲ ಕಾರಣ ಗೊತ್ತಾಗಬೇಕಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ನೆಲ್ಲಿಕಾಯಿ :*ನಿಮಗೆ ಬೇಕಾಗಿರುವುದು 3-4 ನೆಲ್ಲಿಕಾಯಿ, 1 ಕಪ್ ನೀರು, *ಮೊದಲಿಗೆ ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, *ನಂತರ ಒಂದು ಲೋಟ ನೀರಿಗೆ ಸೇರಿಸಿ, ಕುದಿಯಲು ಬಿಡಿ, *ಚೆನ್ನಾಗಿ ಕುದಿಸಿದ ನಂತರ ಒಲೆಯಿಂದ ಕೆಳಗಿಳಿಸಿ, ತಣ್ಣಗಾಗಲು ಬಿಡಿ. ಆನಂತರ ಸೋಸಿ, *ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ

ಕೊಬ್ಬರಿ ಎಣ್ಣೆ: *1-2 ಟೇಬಲ್ ಸ್ಪೂನ್ ಶುದ್ಧವಾದ ತಾಜಾ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ನಿಮ್ಮ ನೆತ್ತಿ ಮತ್ತು ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚಿ, *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ, *ಗುಣಮಟ್ಟದ ಕಂಡಿಷನರ್ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ
ಅಲೊವೆರಾ: *ಅಲೊವೆರಾ ಜ್ಯೂಸ್ ಒಂದು ಕಪ್ ತೆಗೆದಿಟ್ಟುಕೊಳ್ಳಿ, *ಗೋರಂಟಿ ಅಥವಾ ಕಾಫಿ ಜೊತೆಯಲ್ಲಿ ಇದನ್ನು ಸೇರಿಸಿ, *ಇದನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಡಿ, *ತಿಂಗಳಿಗೊಮ್ಮೆ ಹೀಗೆ ಮಾಡಬಹುದು. ಅಲೊವೆರಾ ಜ್ಯೂಸ್ ಅನ್ನು ವಾರಕ್ಕೊಮ್ಮೆ ಬಳಸಬಹುದು.

ಕರಿಬೇವಿನ ಎಲೆಗಳು: *15-20 ಕರಿಬೇವಿನ ಎಲೆಗಳು, ½ ಕಪ್ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ಒಂದು ಬಟ್ಟಲಿನಲ್ಲಿ ಕೊಬ್ಬರಿ ಎಣ್ಣೆಗೆ 15-20 ಕರಿಬೇವಿನ ಎಲೆ ಸೇರಿಸಿ ಕುದಿಸಿ. *ಎಣ್ಣೆ ಕಪ್ಪು ಬಣ್ಣಕ್ಕೆ ತಿರುಗಿದಾಗ, ಒಲೆ ಆಫ್ ಮಾಡಿ. ತಣ್ಣಗಾಗಲು ಬಿಡಿ. ಇದನ್ನು ಕೂದಲು ಮತ್ತು ನೆತ್ತಿಗೆ ಹಚ್ಚಿ. ಕನಿಷ್ಠ ಒಂದು ಗಂಟೆ ಕಾಲ ಬಿಡಿ, *ಬೇಗ ಫಲಿತಾಂಶ ಬೇಕೆಂದರೆ ವಾರಕ್ಕೊಮ್ಮೆ ಮಾಡಬಹುದು
ಭೃಂಗರಾಜ ಎಣ್ಣೆ ಅಥವಾ ಪುಡಿ: *ನೆತ್ತಿಗೆ ಮತ್ತು ಕೂದಲಿಗೆ ಭೃಂಗರಾಜ ಎಣ್ಣೆ ಹಚ್ಚಿ. *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ. *ಎಣ್ಣೆಯಿಲ್ಲದಿದ್ದರೆ ಭೃಂಗರಾಜ ಪುಡಿಯನ್ನು ನೀರಿನೊಂದಿಗೆ ಬೆರೆಸಿ ದಪ್ಪ ಪೇಸ್ಟ್ ಮಾಡಿ. *ಇದನ್ನು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಟ್ಟು ತೊಳೆಯಿರಿ. *ವಾರಕೊಮ್ಮೆ ಅಥವಾ ತಿಂಗಳಿಗೊಮ್ಮೆ ನೀವಿದನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…