ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ಆನೆಗಳನ್ನು ತಂದು ಇಲ್ಲಿ ಆರೈಕೆ ಮಾಡುವ ಯೋಜನೆ ಹೊಂದಿದ್ದಾರೆ.

ಇನ್ನು ಪ್ರತೀ ದಿನ ಬೆಳಗ್ಗೆ ಒಂದೊಂದು ಆನೆಗೂ 25 ಕೆಜಿ ಹುಲ್ಲು ನೀಡಲಾಗುತ್ತದೆ. ಹಾಗೇ ರಾಗಿ ಮುದ್ದೆ, ಹಣ್ಣುಗಳು ಹಾಗೂ ಪೋಷಕಾಂಶಗಳಿರುವ ಆಹಾರವನ್ನು ಕೊಡಲಾಗುತ್ತದೆ. ಮತ್ತೆ ಮಧ್ಯಾಹ್ನ 3 ಗಂಟೆಗೆ ಭತ್ತ, ಕೊಬ್ಬರಿ, ಕುಚುರೆ, ಅವಲಕ್ಕಿ, ಮುದ್ದೆ ನೀಡಲಾಗುತ್ತೆ. ಇನ್ನು ಇಡೀ ರಾತ್ರಿ ಹುಲ್ಲನ್ನು ಹಾಕಲಾಗುತ್ತದೆ. ಒಂದು ಆನೆಗೆ ಒಂದು ದಿನಕ್ಕೆ ಒಟ್ಟು 150 ಕೆಜಿ ಹುಲ್ಲು ಹಾಗು 20 ಕೆಜಿಯಂತೆ ದಿನಕ್ಕೆ ಎರಡು ಬಾರಿ ಒಟ್ಟು 40 ಕೆಜಿ ಪೌಷ್ಠಿಕಾಂಶವುಳ್ಳ ರಾಗಿ ಮುದ್ದೆಯನ್ನು ನೀಡಲಾಗುತ್ತದೆ.

ಇನ್ನು ದಿನಕ್ಕೆರಡು ಬಾರಿ ಆನೆಗಳಿಗೆ ಸ್ನಾನ, ಬೆಳಗ್ಗೆ – ಸಂಜೆ ವಾಕಿಂಗ್ ಮಾಡಿಸಲಾಗುತ್ತದೆ. ಮುಖ್ಯವಾಗಿ ಅನಿಶಾ ಮತ್ತು ದುರ್ಗಾ ಆನೆಗಳು ಆರ್ಥ್ರೈಟಿಸ್, ಬಾರ್ಡರ್ ಲೈನ್ ಹಾಗೂ ಡಯಾಬಿಟಿಸ್ ನಿಂದ ಹೆಚ್ಚಾಗಿ ಬಳಲುತ್ತಿವೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಪ್ರತೀ ದಿನ ಎರಡು ಬಾರಿ ಆನೆಗಳಿಗೆ ಚಿಕಿತ್ಸೆ ಕೊಡಲಾಗುತ್ತದೆ. ಜಾಯಿಂಟ್ ನೀಡ್ ಎಂಬ ಒಂದು ಮೆಡಿಸನ್ ಗೆ ಒಂದು ಆನೆಗೆ 30 ಸಾವಿರ ರೂಪಾಯಿ ಖರ್ಚಾಗಲಿದೆ. ಒಂದು ತಿಂಗಳಿಗೆ ಒಂದು ಆನೆಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ರೂಪಾಯಿ ಖರ್ಚು ಬರುತ್ತೆ ಎಂದು WRRC ಸಂಸ್ಥಾಪಕ ಟ್ರಸ್ಟಿಗಳಾದ ಡಾ.ಶೀಲಾರಾವ್ ಹಾಗೂ ಸುಪರ್ಣ ಗಂಗೂಲಿ ಅವರು ಮಾಹಿತಿ ನೀಡಿದರು.

ಆರೈಕೆ ಕೇಂದ್ರದಲ್ಲಿ ಒಟ್ಟು 9 ಮಂದಿ ಸಿಬ್ಬಂದಿ ಇದ್ದಾರೆ. ಅದರಲ್ಲಿ ಇಬ್ಬರು ವೈದ್ಯರು, ಐವರು ಮಾವುತರು, ಒಬ್ಬ ವೆಟರ್ನರಿ ಡಾಕ್ಟರ್ ಇದ್ದಾರೆ. ಆನೆಗಳ ಆರೈಕೆ ಕೇಂದ್ರವು ನಿಷೇಧಿತ ಪ್ರದೇಶವಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ಹಾಗೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುತ್ತಲೂ ವಿದ್ಯುತ್ ಬೇಲಿ ಯನ್ನು ಹಾಕಲಾಗಿದ್ದು, ಕೇಂದ್ರದ ಸುತ್ತಲೂ ಸುಮಾರು 18 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.