Animals

ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

354

ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ಆನೆಗಳನ್ನು ತಂದು ಇಲ್ಲಿ ಆರೈಕೆ ಮಾಡುವ ಯೋಜನೆ ಹೊಂದಿದ್ದಾರೆ.

ಇನ್ನು ಪ್ರತೀ ದಿನ ಬೆಳಗ್ಗೆ ಒಂದೊಂದು ಆನೆಗೂ 25 ಕೆಜಿ ಹುಲ್ಲು ನೀಡಲಾಗುತ್ತದೆ. ಹಾಗೇ ರಾಗಿ ಮುದ್ದೆ, ಹಣ್ಣುಗಳು ಹಾಗೂ ಪೋಷಕಾಂಶಗಳಿರುವ ಆಹಾರವನ್ನು ಕೊಡಲಾಗುತ್ತದೆ. ಮತ್ತೆ ಮಧ್ಯಾಹ್ನ 3 ಗಂಟೆಗೆ ಭತ್ತ, ಕೊಬ್ಬರಿ, ಕುಚುರೆ, ಅವಲಕ್ಕಿ, ಮುದ್ದೆ ನೀಡಲಾಗುತ್ತೆ. ಇನ್ನು ಇಡೀ ರಾತ್ರಿ ಹುಲ್ಲನ್ನು ಹಾಕಲಾಗುತ್ತದೆ. ಒಂದು ಆನೆಗೆ ಒಂದು ದಿನಕ್ಕೆ ಒಟ್ಟು 150 ಕೆಜಿ ಹುಲ್ಲು ಹಾಗು 20 ಕೆಜಿಯಂತೆ ದಿನಕ್ಕೆ ಎರಡು ಬಾರಿ ಒಟ್ಟು 40 ಕೆಜಿ ಪೌಷ್ಠಿಕಾಂಶವುಳ್ಳ ರಾಗಿ ಮುದ್ದೆಯನ್ನು ನೀಡಲಾಗುತ್ತದೆ.

 

ಇನ್ನು ದಿನಕ್ಕೆರಡು ಬಾರಿ ಆನೆಗಳಿಗೆ ಸ್ನಾನ, ಬೆಳಗ್ಗೆ – ಸಂಜೆ ವಾಕಿಂಗ್ ಮಾಡಿಸಲಾಗುತ್ತದೆ. ಮುಖ್ಯವಾಗಿ ಅನಿಶಾ ಮತ್ತು ದುರ್ಗಾ ಆನೆಗಳು ಆರ್ಥ್ರೈಟಿಸ್, ಬಾರ್ಡರ್ ಲೈನ್ ಹಾಗೂ ಡಯಾಬಿಟಿಸ್ ನಿಂದ ಹೆಚ್ಚಾಗಿ ಬಳಲುತ್ತಿವೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಪ್ರತೀ ದಿನ ಎರಡು ಬಾರಿ ಆನೆಗಳಿಗೆ ಚಿಕಿತ್ಸೆ ಕೊಡಲಾಗುತ್ತದೆ. ಜಾಯಿಂಟ್ ನೀಡ್ ಎಂಬ ಒಂದು ಮೆಡಿಸನ್ ಗೆ ಒಂದು ಆನೆಗೆ 30 ಸಾವಿರ ರೂಪಾಯಿ ಖರ್ಚಾಗಲಿದೆ. ಒಂದು ತಿಂಗಳಿಗೆ ಒಂದು ಆನೆಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ರೂಪಾಯಿ ಖರ್ಚು ಬರುತ್ತೆ ಎಂದು WRRC ಸಂಸ್ಥಾಪಕ ಟ್ರಸ್ಟಿಗಳಾದ ಡಾ.ಶೀಲಾರಾವ್ ಹಾಗೂ ಸುಪರ್ಣ ಗಂಗೂಲಿ ಅವರು ಮಾಹಿತಿ ನೀಡಿದರು.

ಆರೈಕೆ ಕೇಂದ್ರದಲ್ಲಿ ಒಟ್ಟು 9 ಮಂದಿ ಸಿಬ್ಬಂದಿ ಇದ್ದಾರೆ. ಅದರಲ್ಲಿ ಇಬ್ಬರು ವೈದ್ಯರು, ಐವರು ಮಾವುತರು, ಒಬ್ಬ ವೆಟರ್ನರಿ ಡಾಕ್ಟರ್ ಇದ್ದಾರೆ. ಆನೆಗಳ ಆರೈಕೆ ಕೇಂದ್ರವು ನಿಷೇಧಿತ ಪ್ರದೇಶವಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ಹಾಗೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುತ್ತಲೂ ವಿದ್ಯುತ್ ಬೇಲಿ ಯನ್ನು ಹಾಕಲಾಗಿದ್ದು, ಕೇಂದ್ರದ ಸುತ್ತಲೂ ಸುಮಾರು 18 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…