ಸುದ್ದಿ

ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

44

2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…