ಸುದ್ದಿ

ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

129

ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ.

ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ ತಲ್ಲೂರು ಕೆರೆ ಅಭಿವೃದ್ದಿ ಪಡಿಸಿದ್ರು. ಅವರ ಶ್ರಮದಂತೆ ತಲ್ಲೂರು ಕೆರೆಯೂ ಸಂಪೂರ್ಣವಾಗಿ ಭರ್ತಿಯಾಗಿ 25 ಕ್ಕೂ ಹೆಚ್ಚು ಹಳ್ಳಿಗಳಿಗೆ ಕುಡಿಯೋ ನೀರು ಒದಗಿಸುತ್ತಿದೆ. ಆದ್ರೆ ಕೊಪ್ಪಳದ ಸಣ್ಣನೀರಾವರಿ ಇಲಾಖೆ ಮಾತ್ರ 2015-16ರಲ್ಲಿ ಕಾಟಾಚಾರಕ್ಕೆ ಅಲ್ಪಸ್ವಲ್ಪ ಕಾಮಗಾರಿ ನಡೆಸಿ ಬರೊಬ್ಬರಿ 1 ಕೋಟಿ ಹಣ ಗುಳುಂ ಮಾಡಿದ್ದಾರೆ. ಈ ಬಗ್ಗೆ ಟಿವಿ5ಗೆ ದಾಖಲೆಗಳು ಲಭ್ಯವಾಗಿದ್ದು, ಸಣ್ಣನೀರಾವರಿ ಇಲಾಖೆ ಕೆರೆಯನ್ನು ಅಭಿವೃದ್ದಿ ಪಡಿಸಿದ್ರೆ, ಯಶ್ ಯಾಕೆ ಇಲ್ಲಿ ಬಂದು ಅಷ್ಟೊಂದು ಹಣ ಖರ್ಚು ಮಾಡಿ ಕೆರೆ ಅಭಿವೃದ್ದಿ ಪಡಿಸ್ತಾ ಇದ್ರು ಎನ್ನುವ ಮಾತುಗಳು ಕೇಳಿಬಂದಿದೆ.

ಇಲಾಖೆಯ ಅಧಿಕಾರಿಗಳು ತಲ್ಲೂರು ಕೆರೆಯ ತಡೆಗೊಡೆ ನಿರ್ಮಾಣ, ಊಳೆತ್ತುವುದು ಸೇರಿದಂತೆ ಕೆರೆಗೆ ನೀರು ಹರಿಯುವುದಕ್ಕೆ ಕಾಲುವೆಗಳನ್ನು ನಿರ್ಮಾಣ ಮಾಡಿದ್ಧೇವೆ ಅಂತಾ ಬರೊಬ್ಬರಿ 1 ಕೋಟಿ 4 ಲಕ್ಷ ರೂ ಹಣ ಎತ್ತುವಳಿ ಮಾಡಿದ್ದಾರೆ. ಕೇವಲ 5 ರಿಂದ 10 ಲಕ್ಷ ರೂ ಹಣ ಮಾತ್ರ ಅಧಿಕಾರಿಗಳು ಖರ್ಚು ಮಾಡಿ ಕೋಟಿ ರೂ ಹಣ ಕಮಾಯ್ ಮಾಡಿದ್ದಾರೆ. ತಕ್ಷಣ ಈ ಬಗ್ಗೆ ಸಣ್ಣನೀರಾವರಿ ಇಲಾಖೆಯ ಸಚಿವರು ಇತ್ತ ಕಡೆ ಗಮನಹರಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಈ ಹಿಂದೆ ಕೊಪ್ಪಳ ಸಣ್ಣನೀರಾವರಿ ಇಲಾಖೆಯ ನಡೆದಿದ್ದ ಹಗರಣ ಸಿಐಡಿ ತನಿಖೆಯಲ್ಲಿ ಇರುವಾಗಲೇ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ಇಲಾಖೆಯ ವಿರುದ್ದ ಜನ್ರು ಛೀಮಾರಿ ಹಾಕ್ತಾ ಇದ್ದಾರೆ.. ಈಗಲಾದ್ರೂ ಯಶ್ ನ ಕನಸಿನ ಕೂಸು ತಲ್ಲೂರು ಕೆರೆಯ ಹಗರಣವನ್ನು ಸಣ್ಣನೀರಾವರಿ ಸಚಿವರಾದ ಸಿ.ಎಸ್ ಪುಟ್ಟರಾಜು ತನಿಖೆ ನಡೆಸ್ತಾರಾ ಕಾದು ನೋಡಬೇಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…