ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್
ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…