ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ.
ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.

ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ ಬಗ್ಗೆಯೂ ದುಷ್ಮನಿ ಮಾಡುವ ಉದ್ದೇಶವಿಲ್ಲ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವೇನು ಕದ್ದಿದ್ದೇವೆ ತೋರಿಸಿ ಎಂದು ಕೇಳಿದ್ದಾರೆ.
ಮಂಡ್ಯದ ಎಲ್ಲಾ ಊರಿನಲ್ಲಿ ಅಂಬರೀಶಣ್ಣನ ಕೊಡುಗೆ ಕಾಣುತ್ತಿದೆ. ನಾವು ಮಾತನಾಡಿದರೆ ಸಿನಿಮಾದವರು, ನೀವೇನು ಸತ್ಯ ಹರಿಶ್ಚಂದ್ರನ ತುಂಡುಗಳಾ? ಅಂಬರೀಶಣ್ಣ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಾವು ಮನಸ್ಸಾಕ್ಷಿ ಇಟ್ಟುಕೊಂಡು ಬದುಕುತ್ತಿದ್ದೇವೆ. ನಮಗೆ ಕೆಲಸ ಮಾಡಿದ್ದೇವೆ ಅಂತ ಸಾಕ್ಷಿ ಕೊಡುವುದಕ್ಕೆ ಆಗಲ್ಲ. ಸಾಕ್ಷಿಯನ್ನು ಮಂಡ್ಯದ ಜನ ಕೊಡುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ, ತಮ್ಮ ವಿರುದ್ಧ ಟೀಕೆ ಮಾಡಿದವರಿಗೆ ಯಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿದ ಅವರು, ನಾವು ಚುನಾವಣೆ ಪ್ರಚಾರಕ್ಕೆ ಏಕೆ ಬಂದಿದ್ದೇವೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಚುನಾವಣೆಗೆ ಬಂದಿರುವುದಕ್ಕೆ ನಾವು ಕೆಟ್ಟವರು ಆಗಿದ್ದೇವೆ ಎಂದು ಹೇಳಿದ್ದಾರೆ.

ಮನುಷ್ಯನಿಗೆ ನೀಯತ್ತು ಬಹಳ ಮುಖ್ಯ ನಾನು ಬೆಳೆಯುವ ಸಂದರ್ಭದಲ್ಲಿ ಅಂಬರೀಶ್ ಅವರು ಬೆನ್ನಿಗೆ ನಿಂತು ಆಶೀರ್ವಾದ ಮಾಡಿದರು. ಅವರ ಕುಟುಂಬಕ್ಕೆ ನಾವು ಮಕ್ಕಳಾಗಿದ್ದೇವೆ. ಅದನ್ನು ಯಾರಾದರೂ ಟೀಕೆ ಮಾಡಿದರೆ ಯಾರಾದರೂ ಪ್ರಶ್ನೆ ಮಾಡಿದರೆ ಅದು ಸರಿಯಲ್ಲ ಎಂದು ಟಾಂಗ್ ನೀಡಿದ್ದಾರೆ.
ಅಂಬರೀಶ್ ಇದ್ದಾಗ ಸುಮ್ಮನೆ ನಿಲ್ಲುತ್ತಿದ್ದವರು ಈಗ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಚುನಾವಣೆ ಮಂಡ್ಯ ಸ್ವಾಭಿಮಾನದ ಪ್ರಶ್ನೆಯಾಗಿದೆ. ಸುಮಲತಾ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಿದ ಕೂಡಲೇ ಕೆಟ್ಟವರಾಗಿ ಹೋದರೆ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಕೆಲಸ ನೀವು ಮಾಡಿದ್ದರೆ ಜನರು ಆಶೀರ್ವಾದ ಮಾಡುತ್ತಾರೆ. ಅದನ್ನು ಬಿಟ್ಟು ಗಂಡ ಸತ್ತವರು ಮನೆ ಸೇರಿಕೊಳ್ಳಬೇಕು. ಮನೆಯಿಂದ ಆಚೆ ಬರಬಾರದು. ಯಾವುದೋ ಊರಿಗೆ ಸೇರಿದವರು, ಜಾತಿಗೆ ಸಂಬಂಧಪಟ್ಟವರಲ್ಲ ಎಂದೆಲ್ಲಾ ಹೇಳುವುದು ಯಾವ ನ್ಯಾಯ ಪ್ರಶ್ನಿಸಿದ್ದಾರೆ.

ಸುಮಲತಾ ಅವರ ಪರ ಪ್ರಚಾರಕ್ಕೆ ಬಂದ ನಾವು ಕಳ್ಳ ಎತ್ತುಗಳು ಆಗಿ ಬಿಡುತ್ತೇವೆಯೇ ಎಂದು ಕೇಳಿದ ಯಶ್, ರೈತರ ಬಗ್ಗೆ ನಮಗೂ ಅಭಿಮಾನ ಇದೆ. ಯಾರು ನಮ್ಮನ್ನು ಹೀಯಾಳಿಸುತ್ತಾರೆಯೋ ಅಷ್ಟೇ ನಾವು ಮೆರೆಯುತ್ತೇವೆ. ಸುಮಲತಾ ಅಕ್ಕ ಒಳ್ಳೆಯ ಕೆಲಸ ಮಾಡುತ್ತಾರೆ. ಅವರ ಜೊತೆಗೆ ನಾವು ಇರುತ್ತೇವೆ. ಒಂದೇ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿ ಜೆಡಿಎಸ್ ನಾಯಕರಿಗೆ ಬಹಿರಂಗವಾಗಿಯೇ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…