ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.