ಆರೋಗ್ಯ

ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

194

ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.

ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!

ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ

ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ

ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ

ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,

ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ

ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)

ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ

ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ

ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.

ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಸುದ್ದಿ

    ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

    ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…