News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

133

ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. 

ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು ಮನಸ್ಸು ಬಯಸುತ್ತದೆ… ಯಾಕೆಂದರೆ, ಈಕೆಯ ಸಾಧನೆ ಅಂತಿಂಥಹದ್ದಲ್ಲ…!

ರಿಯಾ ಬುಲೋಸ್… ಈ ಕತೆಯ ನಾಯಕಿ. ಫಿಲಿಪೈನ್ಸ್‌ನ 11 ವರ್ಷದ ಈ ಟ್ರ್ಯಾಕ್ ಅಥ್ಲೀಟ್ ತನ್ನ `ತಾತ್ಕಾಲಿಕ ಶೂ’ ತೊಟ್ಟು ಓಟದಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ, ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಛಲದ ಮೂಲಕ ವಿಶ್ವದ ಹೃದಯ ಗೆದ್ದಿದ್ದಾಳೆ. ನೆಟ್ಟಿಗರಂತೂ ರಿಯಾ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು.  ಶಾಲೆಗಳ ಕ್ರೀಡಾಕೂಟದಲ್ಲಿ ರಿಯಾ ಬುಲೋಸ್ 400 ಮೀಟರ್, 800 ಮೀಟರ್ ಮತ್ತು 1,500 ಮೀಟರ್ ಸ್ಪರ್ಧೆಗಳಲ್ಲಿ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ. ಈ ವೇಳೆ, ಈಕೆಯ ಸಾಧನೆಯ ಜೊತೆಜೊತೆ ಎಲ್ಲರ ಹೃದಯ ಭಾರವಾಗಿಸಿದ್ದು ಬಾಲಕಿಯ `ತಾತ್ಕಾಲಿಕ ಶೂ’ ಮತ್ತು ಆಕೆಯ ಬಡತನ.

ರಿಯಾ ಮೂರು ಚಿನ್ನದ ಪದಕ ಗೆದ್ದಿರುವ ಹಿಂದೆ ನೋವಿನ ಕತೆ ಇದೆ. ಈಕೆಗೆ ಸಾಧಿಸುವ ಛಲವಿತ್ತು ನಿಜ. ಆದರೆ, ಇದಕ್ಕೆ ಬಡತನ ಅಡ್ಡಿಯಾಗಿತ್ತು. ಹಾಗಂತ, ರಿಯಾ ಮನೆಯಲ್ಲಿ ಸುಮ್ಮನೆ ಕುಳಿತಿರಲಿಲ್ಲ. ಆಟದಲ್ಲಿ ಪಾಲ್ಗೊಂಡಿದ್ದಳು. ಸ್ಪೋರ್ಟ್ಸ್‌ ಶೂ ಕೊಳ್ಳಲೂ ಹಣ ಇರಲಿಲ್ಲ. ಆದರೆ, ಆಟದಲ್ಲಿ ಪಾಲ್ಗೊಳ್ಳದೆ ಮನಸ್ಸು ಕೇಳಿರಲಿಲ್ಲ. ಹೀಗಾಗಿ, ಬಾಲಕಿಯೇ ಒಂದು ತಾತ್ಕಾಲಿಕ ಶೂ ತಯಾರಿಸಿದ್ದಳು. ಅದೇ ಬ್ಯಾಂಡೇಜ್ ಶೂ…! ನಿಜ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ರಿಯಾ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಓಡಿದ್ದಳು…!

ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್‍ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.

ವೇಲೆನ್‍ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್‍ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.



About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…