ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.
ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು ಮನಸ್ಸು ಬಯಸುತ್ತದೆ… ಯಾಕೆಂದರೆ, ಈಕೆಯ ಸಾಧನೆ ಅಂತಿಂಥಹದ್ದಲ್ಲ…!
ರಿಯಾ ಬುಲೋಸ್… ಈ ಕತೆಯ ನಾಯಕಿ. ಫಿಲಿಪೈನ್ಸ್ನ 11 ವರ್ಷದ ಈ ಟ್ರ್ಯಾಕ್ ಅಥ್ಲೀಟ್ ತನ್ನ `ತಾತ್ಕಾಲಿಕ ಶೂ’ ತೊಟ್ಟು ಓಟದಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ, ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಛಲದ ಮೂಲಕ ವಿಶ್ವದ ಹೃದಯ ಗೆದ್ದಿದ್ದಾಳೆ. ನೆಟ್ಟಿಗರಂತೂ ರಿಯಾ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಶಾಲೆಗಳ ಕ್ರೀಡಾಕೂಟದಲ್ಲಿ ರಿಯಾ ಬುಲೋಸ್ 400 ಮೀಟರ್, 800 ಮೀಟರ್ ಮತ್ತು 1,500 ಮೀಟರ್ ಸ್ಪರ್ಧೆಗಳಲ್ಲಿ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ. ಈ ವೇಳೆ, ಈಕೆಯ ಸಾಧನೆಯ ಜೊತೆಜೊತೆ ಎಲ್ಲರ ಹೃದಯ ಭಾರವಾಗಿಸಿದ್ದು ಬಾಲಕಿಯ `ತಾತ್ಕಾಲಿಕ ಶೂ’ ಮತ್ತು ಆಕೆಯ ಬಡತನ.
ರಿಯಾ ಮೂರು ಚಿನ್ನದ ಪದಕ ಗೆದ್ದಿರುವ ಹಿಂದೆ ನೋವಿನ ಕತೆ ಇದೆ. ಈಕೆಗೆ ಸಾಧಿಸುವ ಛಲವಿತ್ತು ನಿಜ. ಆದರೆ, ಇದಕ್ಕೆ ಬಡತನ ಅಡ್ಡಿಯಾಗಿತ್ತು. ಹಾಗಂತ, ರಿಯಾ ಮನೆಯಲ್ಲಿ ಸುಮ್ಮನೆ ಕುಳಿತಿರಲಿಲ್ಲ. ಆಟದಲ್ಲಿ ಪಾಲ್ಗೊಂಡಿದ್ದಳು. ಸ್ಪೋರ್ಟ್ಸ್ ಶೂ ಕೊಳ್ಳಲೂ ಹಣ ಇರಲಿಲ್ಲ. ಆದರೆ, ಆಟದಲ್ಲಿ ಪಾಲ್ಗೊಳ್ಳದೆ ಮನಸ್ಸು ಕೇಳಿರಲಿಲ್ಲ. ಹೀಗಾಗಿ, ಬಾಲಕಿಯೇ ಒಂದು ತಾತ್ಕಾಲಿಕ ಶೂ ತಯಾರಿಸಿದ್ದಳು. ಅದೇ ಬ್ಯಾಂಡೇಜ್ ಶೂ…! ನಿಜ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ರಿಯಾ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಓಡಿದ್ದಳು…!
ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.
ವೇಲೆನ್ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…