ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.
ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು ಮನಸ್ಸು ಬಯಸುತ್ತದೆ… ಯಾಕೆಂದರೆ, ಈಕೆಯ ಸಾಧನೆ ಅಂತಿಂಥಹದ್ದಲ್ಲ…!

ರಿಯಾ ಬುಲೋಸ್… ಈ ಕತೆಯ ನಾಯಕಿ. ಫಿಲಿಪೈನ್ಸ್ನ 11 ವರ್ಷದ ಈ ಟ್ರ್ಯಾಕ್ ಅಥ್ಲೀಟ್ ತನ್ನ `ತಾತ್ಕಾಲಿಕ ಶೂ’ ತೊಟ್ಟು ಓಟದಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ, ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಛಲದ ಮೂಲಕ ವಿಶ್ವದ ಹೃದಯ ಗೆದ್ದಿದ್ದಾಳೆ. ನೆಟ್ಟಿಗರಂತೂ ರಿಯಾ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಶಾಲೆಗಳ ಕ್ರೀಡಾಕೂಟದಲ್ಲಿ ರಿಯಾ ಬುಲೋಸ್ 400 ಮೀಟರ್, 800 ಮೀಟರ್ ಮತ್ತು 1,500 ಮೀಟರ್ ಸ್ಪರ್ಧೆಗಳಲ್ಲಿ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ. ಈ ವೇಳೆ, ಈಕೆಯ ಸಾಧನೆಯ ಜೊತೆಜೊತೆ ಎಲ್ಲರ ಹೃದಯ ಭಾರವಾಗಿಸಿದ್ದು ಬಾಲಕಿಯ `ತಾತ್ಕಾಲಿಕ ಶೂ’ ಮತ್ತು ಆಕೆಯ ಬಡತನ.

ರಿಯಾ ಮೂರು ಚಿನ್ನದ ಪದಕ ಗೆದ್ದಿರುವ ಹಿಂದೆ ನೋವಿನ ಕತೆ ಇದೆ. ಈಕೆಗೆ ಸಾಧಿಸುವ ಛಲವಿತ್ತು ನಿಜ. ಆದರೆ, ಇದಕ್ಕೆ ಬಡತನ ಅಡ್ಡಿಯಾಗಿತ್ತು. ಹಾಗಂತ, ರಿಯಾ ಮನೆಯಲ್ಲಿ ಸುಮ್ಮನೆ ಕುಳಿತಿರಲಿಲ್ಲ. ಆಟದಲ್ಲಿ ಪಾಲ್ಗೊಂಡಿದ್ದಳು. ಸ್ಪೋರ್ಟ್ಸ್ ಶೂ ಕೊಳ್ಳಲೂ ಹಣ ಇರಲಿಲ್ಲ. ಆದರೆ, ಆಟದಲ್ಲಿ ಪಾಲ್ಗೊಳ್ಳದೆ ಮನಸ್ಸು ಕೇಳಿರಲಿಲ್ಲ. ಹೀಗಾಗಿ, ಬಾಲಕಿಯೇ ಒಂದು ತಾತ್ಕಾಲಿಕ ಶೂ ತಯಾರಿಸಿದ್ದಳು. ಅದೇ ಬ್ಯಾಂಡೇಜ್ ಶೂ…! ನಿಜ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ರಿಯಾ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಓಡಿದ್ದಳು…!

ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.
ವೇಲೆನ್ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…