ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.
ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು ಮನಸ್ಸು ಬಯಸುತ್ತದೆ… ಯಾಕೆಂದರೆ, ಈಕೆಯ ಸಾಧನೆ ಅಂತಿಂಥಹದ್ದಲ್ಲ…!

ರಿಯಾ ಬುಲೋಸ್… ಈ ಕತೆಯ ನಾಯಕಿ. ಫಿಲಿಪೈನ್ಸ್ನ 11 ವರ್ಷದ ಈ ಟ್ರ್ಯಾಕ್ ಅಥ್ಲೀಟ್ ತನ್ನ `ತಾತ್ಕಾಲಿಕ ಶೂ’ ತೊಟ್ಟು ಓಟದಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ, ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಛಲದ ಮೂಲಕ ವಿಶ್ವದ ಹೃದಯ ಗೆದ್ದಿದ್ದಾಳೆ. ನೆಟ್ಟಿಗರಂತೂ ರಿಯಾ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಶಾಲೆಗಳ ಕ್ರೀಡಾಕೂಟದಲ್ಲಿ ರಿಯಾ ಬುಲೋಸ್ 400 ಮೀಟರ್, 800 ಮೀಟರ್ ಮತ್ತು 1,500 ಮೀಟರ್ ಸ್ಪರ್ಧೆಗಳಲ್ಲಿ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ. ಈ ವೇಳೆ, ಈಕೆಯ ಸಾಧನೆಯ ಜೊತೆಜೊತೆ ಎಲ್ಲರ ಹೃದಯ ಭಾರವಾಗಿಸಿದ್ದು ಬಾಲಕಿಯ `ತಾತ್ಕಾಲಿಕ ಶೂ’ ಮತ್ತು ಆಕೆಯ ಬಡತನ.

ರಿಯಾ ಮೂರು ಚಿನ್ನದ ಪದಕ ಗೆದ್ದಿರುವ ಹಿಂದೆ ನೋವಿನ ಕತೆ ಇದೆ. ಈಕೆಗೆ ಸಾಧಿಸುವ ಛಲವಿತ್ತು ನಿಜ. ಆದರೆ, ಇದಕ್ಕೆ ಬಡತನ ಅಡ್ಡಿಯಾಗಿತ್ತು. ಹಾಗಂತ, ರಿಯಾ ಮನೆಯಲ್ಲಿ ಸುಮ್ಮನೆ ಕುಳಿತಿರಲಿಲ್ಲ. ಆಟದಲ್ಲಿ ಪಾಲ್ಗೊಂಡಿದ್ದಳು. ಸ್ಪೋರ್ಟ್ಸ್ ಶೂ ಕೊಳ್ಳಲೂ ಹಣ ಇರಲಿಲ್ಲ. ಆದರೆ, ಆಟದಲ್ಲಿ ಪಾಲ್ಗೊಳ್ಳದೆ ಮನಸ್ಸು ಕೇಳಿರಲಿಲ್ಲ. ಹೀಗಾಗಿ, ಬಾಲಕಿಯೇ ಒಂದು ತಾತ್ಕಾಲಿಕ ಶೂ ತಯಾರಿಸಿದ್ದಳು. ಅದೇ ಬ್ಯಾಂಡೇಜ್ ಶೂ…! ನಿಜ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ರಿಯಾ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಓಡಿದ್ದಳು…!

ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.
ವೇಲೆನ್ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…